ಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??

ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, […]

Continue Reading

ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ

ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಧ್ವಂಸ ಘಟನೆ ಖಂಡನೀಯ, ಅಸಹನೀಯ : ಶಾಸಕರ ಆಕ್ರೋಶ

ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು. ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು […]

Continue Reading

‘ಸಹ್ಯಾದ್ರಿ_ಮಲೆನಾಡು ಉತ್ಸವ’ ಆಯೋಜನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.ಜಿಲ್ಲೆಯ ಹಿರಿಯ ಸಾಧಕರನ್ನು […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ಶಿವಮೊಗ್ಗ | ಶಾಸಕರಿಂದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ​

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಆನಂದ್, ಮಲ್ಲಿಕಾರ್ಜುನ, ಮಂಜುನಾಥ್, ಶಿವುಕುಮಾರ್, ಮಾಲತೇಶ್, ನಾಗರಾಜ, ಶ್ರೀಮತಿ ಶಶಿಕಲಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಪ್ರಕರಣ ; ಎನ್. ಐ.ಎ ತನಿಖೆಗೆ ಒಪ್ಪಿಸಿ : ಶಾಸಕ ಚನ್ನಬಸಪ್ಪ ಅಗ್ರಹ

ಕೊಲೆ ಮಾಡಿದರೂ ಅಪ್ರಾಪ್ತ ಎಂಬ ಕಾರಣಕ್ಕೆ ಆರೋಪಿಗಳನ್ನು ಸುಲಭವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹಿಂದೆ ಶಿವಮೊಗ್ಗದಲ್ಲಿ ಪಿ.ಎಫ್.ಐ ನಿಷೇಧವಾಗಿದ್ದರೂ, ಅದರ ಚಟುವಟಿಕೆಗಳು ತೆರೆಯ ಮರೆಯಲ್ಲಿ ನಡೆಯುತ್ತಿವೆ. ಹಿಂದೂ ಮುಖಂಡರ ಹತ್ಯೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳಲ್ಲಿ ಅಪ್ರಾಪ್ತರನ್ನು ಕೋಮು ಪ್ರಚೋದನೆ ನೀಡಿ ಬಳಸಿಕೊಳ್ಳುವವರ ವಿರುದ್ಧ ಕಠಿಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ರಾಜ್ಯ ಬಜೆಟ್ ಕುರಿತು ಮಾತನಾಡಿದ ಚನ್ನಬಸಪ್ಪ, ಈ ಸರ್ಕಾರದ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆಯಿಲ್ಲ. ನಿರೀಕ್ಷೆ ಇಟ್ಟುಕೊಂಡು ನಿರಾಸೆಗೊಳ್ಳುವ […]

Continue Reading

ಶಿವಮೊಗ್ಗ | ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Continue Reading