ಶಿವಮೊಗ್ಗ | ಸರ್. ಎಂ.ವಿ ವಿಚಾರಧಾರೆಗಳು ನಿರಂತರವಾಗಿ ತಿಳಿಸುವಂತಾಗಲಿ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಅಭಿಪ್ರಾಯ

ಸರ್.ಎಂ.ವಿ ಅವರು ವಿಪ್ರ ಸಮಾಜಕ್ಕೆ ಮಾತ್ರ ಸೀಮಿತವಲ್ಲದೇ ಇಡೀ ದೇಶಕ್ಕೆ ಅವರು ಅಭಿವೃದ್ಧಿ ಪತಗಳಲ್ಲಿ ಮನೆ ಮಾತಾಗಿದ್ದರು ಇಂದಿನ ಮಕ್ಕಳಿಗೆ ಅವರ ವಿಚಾರಧಾರೆಗಳು ತಿಳಿಸುವಂತಹ‌ ಕೆಲಸವಾಗಬೇಕು ಕೇವಲ ಪಠ್ಯಪುಸ್ತಕದಲ್ಲಿ ಅಲ್ಲದೆ ಸಾಮಾಜಿಕವಾಗಿ ನಿರಂತರವಾಗಿ ಅವರ ಯೋಚನೆಗಳು ಮಕ್ಕಳಿಗೆ ತಿಳಿಸುವಂತಾಗಬೇಕು ಸಮಾಜದ ವಿವಿಧ ಸಂಘಗಳಲ್ಲಿ ಇರುವ ಅಧ್ಯಕ್ಷರುಗಳು ಯುವಕರಲ್ಲಿ ಇರುವ ಕಲೆಗಳನ್ನು ಗುರುತಿಸಿ ಬೆಳೆಸುವಂತೆ ಆಗಬೇಕು. ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ನಮ್ಮ ಸಮಾಜದ ಯುವಕರನ್ನು ಮಹಾನಗರ ಪಾಲಿಕೆಗೆ ಸದಸ್ಯರಾಗುವಂತೆ ಮಾಡೋಣ ಈ ಹಿಂದೆ ಪಾಲಿಕೆ ವತಿಯಿಂದ ಆಚಾರ್ಯತ್ರಯರ ಜಯಂತಿಗೆ […]

Continue Reading

ಹುಂಚ ಜೈನ ಮಠದ ಪಕ್ಕದಲ್ಲಿರುವ ಮುತ್ತಿನಕೆರೆ ದಂಡೆಗೆ ರಕ್ಷಣಾ ಬೇಲಿ ನಿರ್ಮಿಸಿ ; ನೈಜ ಹೋರಾಟಗಾರರ ವೇದಿಕೆಯಿಂದ ಸಚಿವ ಈಶ್ವರ್ ಖಂಡ್ರೆಗೆ ಅಗ್ರಹ

ಈ ಎರಡು ಬದಿಯ ಕೆರೆ ದಂಡೆಯ ಮೇಲೆ ವಾಹನಗಳು ಚಾಲನೆ ಮಾಡುವುದು ಒಂದು ರೀತಿಯ ಮೃತ್ಯುವಿನಿಂದ ತಪ್ಪಿಸಿಕೊಂಡು ಹೋಗುವ ಅನುಭವವಾಗುತ್ತದೆ. “ಅತ್ತ ಧರೆ ಇತ್ತಪುಲಿ” ಎಂಬಂತೆ ಒಂದು ಬದಿಯಲ್ಲಿ ಕೆರೆ ಇನ್ನೊಂದು ಬದಿಯಲ್ಲಿ ಆಳವಾದ ಕಣಿವೆ ಇದೆ. ಆದ್ದರಿಂದ ಮಾನ್ಯ ಗ್ರಾಮೀಣ ಅಭಿವೃದ್ಧಿ ಸಚಿವರಾದ ತಾವು ತಕ್ಷಣ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಈ ಕೆರೆಯ ದಂಡೆಯ 2 ಭಾಗದಲ್ಲಿ ರಕ್ಷಣಾ ಬೇಲಿಯನ್ನು ನಿರ್ಮಿಸಿ ಸಾರ್ವಜನಿಕರ ಪ್ರಾಣವನ್ನು ಉಳಿಸುವುದಲ್ಲದೆ ಮುಂದಿನ ದಿನಗಳಲ್ಲಿ ಅಪಘಾತವಾಗದಂತೆ ತಡೆಯುವಲ್ಲಿ […]

Continue Reading

ರಿಪ್ಪನ್‌ಪೇಟೆ | ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.6 ಕೆ.ಜಿ ತೂಕವಿರುವ ಮಗು ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಆರೈಕೆ ನೀಡಿ, ಹೆಚ್ಚಿನ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.​ ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Continue Reading

ಶಿವಮೊಗ್ಗ | ಬಲಿಷ್ಠ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ನಮ್ಮ ಮೊದಲ ಹೆಜ್ಜೆ : ಸಂಸದ ಬಿ. ವೈ. ರಾಘವೇಂದ್ರ

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಶ್ರೀ ಹೇಮಂತ್ ಕುಮಾರ್, ಶ್ರೀ ಹನುಮಂತನಾಯ್ಕ್ ಮುಖ್ಯ ಯೋಜನಾಧಿಕಾರಿಗಳು, ಶ್ರೀ ರಂಗಸ್ವಾಮಿ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ತುಂಗಾ ಜಲಾಶಯದಿಂದ ನೀರು ಹೊರಕ್ಕೆ

ಮಳೆ ಚುರುಕು : ಮಲೆನಾಡು ಭಾಗದಲ್ಲಿ ಸಂಪೂರ್ಣ ಇಳಿಕೆಯಾಗಿದ್ದ ಮುಂಗಾರು ಮಳೆ, ಕ್ರಮೇಣ ಚುರುಕುಗೊಳ್ಳಲಾರಂಭಿಸಿದೆ. ಜುಲೈ 04 ರಿಂದ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಲಾರಂಭಿಸಿದೆ. ಮತ್ತೊಂದೆಡೆ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

Continue Reading

ಪೋಲಿಸರ ಭರ್ಜರಿ ಕಾರ್ಯಾಚರಣೆ | ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳ ಬಂಧನ

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ […]

Continue Reading

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ನ್ಯಾ.ಸಂತೋಷ್ ಎಂ.ಎಸ್ ಭೇಟಿ,ಪರಿಶೀಲನೆ

ಅಂತರ್ಜಾಲ ಪುಟ https://103.195.218.159/challan ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಶೀಘ್ರದಲ್ಲಿ, ಅಂದರೆ ದಿನಾಂಕ 10.07.2026ರ ಒಳಗಾಗಿ, ಬಾಕಿ ಉಳಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿಯನ್ನು ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಜನರು ದಂಡವನ್ನು ಪಾವತಿಸಿ ಸರ್ಕಾರಿ ಆದೇಶದ ಹೆಚ್ಚಿನ ಲಾಭವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading