ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಪ್ರತಿಭಟನೆ ; ಜೇಬು ತುಂಬಿಸಿಕೊಳ್ಳುವ ಯೋಜನೆ ಎಂದ ಎ.ಟಿ. ರಾಮಸ್ವಾಮಿ

ಪ್ರೊ. ಬಿ ಎಂ. ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಅದರ ಅಧಿಕಾರಿ ಪ್ರಣೀತಾ ಕೌಲ್ ನೀಡಿದ ವರದಿಯಲ್ಲಿ ಈ ಭಾಗದಲ್ಲಿ ಸಿಂಗಳಿಕ, ಮುಂಗಟ್ಟೆ ಹೆಚ್ಚು ವಾಸಿಸುತ್ತಿವೆ. ಇದರಿಂದ ಇಲ್ಲಿ ಅಭಿವೃದ್ಧಿ ಸಲ್ಲದು ಎಂದು ವರದಿ ನೀಡಿದ್ದರೂ, ರಾಜ್ಯದ ಅರಣ್ಯ ಅಧಿಕಾರಿ ಸೆಂಥಿಲ್‌ಕುಮಾರ್, ಇಲ್ಲಿ ಯೋಜನೆಯಿಂದ ಯಾವುದೇ ಪ್ರ್ರಾಣಿ-ಪಕ್ಷಿಗೆ ಸಮಸ್ಯೆಯಾಗುವುದಿಲ್ಲ. ಈ ಯೋಜನೆ ಜಾರಿಮಾಡಬಹುದು ಎಂದಿರುವುದು ದುರಂತದ ವಿಷಯ ಎಂದರು.

Continue Reading

ಶಿವಮೊಗ್ಗ | ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣಿಕೆ ದುರದೃಷ್ಟಕರ : ನ್ಯಾ. ಸಂತೋಷ್‌ಎಂ.ಎಸ್

ಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ ೨೦೦ಕ್ಕೂ ಹೆಚ್ಚಿನ ಫೋಕ್ಸೋ ಮತ್ತು ೫೦ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ […]

Continue Reading

ಶಿವಮೊಗ್ಗ | ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಭೆ

ಕುಮ್ಮಾರನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ, ಮೆಸ್ಕಾಂ, ಆರೋಗ್ಯ, ಆಹಾರ ಮತ್ತು ಪಡಿತರ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಿದ ಶಾಸಕರು. ಈ ಒಂದು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ಬಡವರ ಆಶಾಕಿರಣ ಯೋಜನೆಗೆ ಮಹತ್ವಪೂರ್ಣ ಅರ್ಥ ಕಲ್ಪಿಸಿದ್ದಾರೆ.

Continue Reading

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ; ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Continue Reading

ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ ಕ್ರೀಡೆಗಳಿಂದ ಸಂಘಟನೆಗೆ ಬಲ : ಹಾರನಹಳ್ಳಿ ಚೌಕಿ ಮಠದ ಸ್ವಾಮೀಜಿ

ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್ ಇತರರು ಇದ್ದರು.

Continue Reading

ಶಿವಮೊಗ್ಗ | ಬೆಸ್ಕಾಂ ಎಇಇ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಶಿವಮೊಗ್ಗ | ಲಾಡ್ಜ್​​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading