ಶಿವಮೊಗ್ಗ | ತಂದೆ ಸಾವಿನ ದುಃಖದಲ್ಲೇ ಪರಿಕ್ಷೆ ಬರೆದ ವಿದ್ಯಾರ್ಥಿನಿಗೆ ಧೈರ್ಯ ಸಾಂತ್ವನ ತುಂಬಿದ ಬಿಇಒ ರಮೇಶ್ ನಾಯ್ಕ್

ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ 1೦ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ಇತ್ತು. ಒಂದೆಡೆ ತಂದೆಯ ಮರಣದ ದುಃಖ, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪರೀಕ್ಷೆ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಆಕೆ ಗೊಂದಲಕ್ಕೀಡಾದಳು. ಕುಟುಂಬದವರು, ಶಿಕ್ಷಕರು ಮತ್ತು ಸ್ನೇಹಿತರು ಧೈರ್ಯ ತುಂಬಿದ ಬಳಿಕ ತರುಣ್ಯ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.ನಂತರ ಮನೆಗೆ ಬಂದು ತಂದೆಯ ಅಂತಿಮ ದರ್ಶನ ಪಡೆದಳು. ಈ ಘಟನೆ ಕೇವಲ ಒಂದು ವಿದ್ಯಾರ್ಥಿನಿಯ ನಿರ್ಧಾರವಲ್ಲ; ಇದು ಸಂಕಷ್ಟಗಳ ನಡುವೆಯೂ ದಿಟ್ಟ […]

Continue Reading

ಮರಳು ಮಾಫಿಯಾ ದಬ್ಬಾಳಿಕೆ, ಜನರ ಸಂಕಷ್ಟ ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

ಗುತ್ತಿಗೆದಾರರು ಕೋಟ್ಯಂತರ ರೂಪಾಯಿ ಇ.ಎಂ.ಡಿ ಹಾಗೂ ಬ್ಯಾಂಕ್ ಗ್ಯಾರಂಟಿ ಸೇರಿದಂತೆ ಮುಂಗಡ ಹಣ ಪಾವತಿಸಿದ್ದರೂ, ಅಗತ್ಯ ಎನ್.ಒ.ಸಿ (NOC)ಗಳ ವಿಳಂಬದಿಂದ ಕಾರ್ಯಾರಂಭಕ್ಕೆ ಅವಕಾಶ ಸಿಗದೇ ಇರುವುದನ್ನು ಖಂಡಿಸಿದರು. ಈ ವಿಳಂಬದಿಂದ ಜಿಲ್ಲೆಯಲ್ಲಿ ಮರಳಿನ ಕೃತಕ ಅಭಾವ ಉಂಟಾಗಿ, ಮರಳು ಮಾಫಿಯಾ ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮಾರಾಟ ನಡೆಸುತ್ತಿರುವುದು ಜನಸಾಮಾನ್ಯರ ಮೇಲೆ ಭಾರೀ ಹೊರೆ ತಂದಿದೆ. ಮನೆ ನಿರ್ಮಾಣ ಹಾಗೂ ಸಾರ್ವಜನಿಕ ಕಾಮಗಾರಿಗಳು ಸ್ಥಗಿತಗೊಂಡು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿ. ಎಸ್. ಅರುಣ್ ಅವರು ವಿಷಾದಿಸಿದರು. ಸಕಾಲದಲ್ಲಿ […]

Continue Reading

ಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ : ವಾಟಗೋಡು ಸುರೇಶ್

ಅಂದು ಮುಂದಾಳತ್ವ ವಹಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ ಎಂದು ಆಪಾದಿಸಿದರು.ಸದ್ಯ ಎರಡು ರಾಷ್ಟ್ರೀಯ ಪಕ್ಷಗಳೂ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿವೆ. ಹಾಗೂ ಪರಸ್ಪರ ವಿರೋಧ ಪಕ್ಷಗಳಾಗಿವೆ. ಸರಕಾರದ ಹಂತದಲ್ಲಿ ಆಗಬೇಕಿರುವ ಕ್ಷೇತ್ರ ಮರುವಿಂಗಡಣೆಗೆ ಸರಕಾರದ ಮಟ್ಟದಲ್ಲಿ ಒತ್ತಡ ಹೇರಬೇಕಾಗಿರುವ ರಾಜಕೀಯ ಮುಖಂಡರು ಅದನ್ನು ಬಿಟ್ಟು ಇಲ್ಲಿ ಜನಸಾಮಾನ್ಯರ ದಿಕ್ಕುತಪ್ಪಿಸಿ ಪಾದಯಾತ್ರೆ ಮಾಡುತ್ತಿರುವುದರ ಔಚಿತ್ಯವೇನು ಎಂದು ಪ್ರಶ್ನಿಸಿದರು..? ಹೊಸನಗರ ಕ್ಷೇತ್ರ ಇಲ್ಲದ ಕಾರಣಕ್ಕೆ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. […]

Continue Reading

ಶಿವಮೊಗ್ಗ | ಧಿಡೀರನೆ ಹೊತ್ತು ಉರಿದ ಲಾರಿ ; ತಪ್ಪಿದ ಭಾರಿ ಅನಾಹುತ

ಶೇಷಾದ್ರಿಪುರಂ ರೈಲ್ವೆ ಮೇಲ್ ಸೇತುವೆಯ ಕೆಳಭಾಗದಲ್ಲಿ ನಿಂತ್ತಿದ್ದ ಈ ಲಾರಿ ಸಾಮಗ್ರಿಗಳನ್ನು ತುಂಬಲು ಬಂದಾಗ ಖಾಲಿ ಲಾರಿಯಾಗಿತ್ತು. ಕೆ.ಎ.-೨೫ಬಿ-೦೮೫೫ ಎಸ್‌ಕೆಪಿ ರೋಡ್ ಲೈನ್ಸ್‌ನ ಮಹಮ್ಮದ್ ಆಬಿದ್ ಅವರಿಗೆ ಸೇರಿದ ಲಾರಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿಯ ಮುಂಭಾಗ ಮತ್ತು ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ .

Continue Reading