ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ “ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನ

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ರಾಜ್ಯ ಪ್ರಕೋಸ್ಟಗಳ ಸಂಚಾಲಕರಾದ ದತ್ತಾತ್ರಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ರಶ್ಮಿ, ಸೂಡಾ ಮಾಜಿ ಅಧ್ಯಕ್ಷರಾದ ನಾಗರಾಜ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಮಾಜಿ ಕಾರ್ಪೊರೇಟರ್ ಪ್ರಭಾಕರ್, ಬಿಜೆಪಿ ನಗರ ಪರಭಾರಿಗಳಾದ ಕುಪೇಂದ್ರ,ರೈತ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ವಿರೋಧಿಸಿ ; ಜೇಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜಾಗೃತಿ ಮತ್ತು ಸ್ಟೀಲ್ ಬಾಟಲ್ ವಿತರಣೆ ಕಾರ್ಯಕ್ರಮ

ಈ ಯೋಜನೆಯಡಿ ಹಂತ ಹಂತವಾಗಿ 500ಕ್ಕೂ ಹೆಚ್ಚು ಸ್ಟೀಲ್ ನೀರಿನ ಬಾಟಲ್‌ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಮಹತ್ವದ ಯೋಜನೆಗೆ ಸುಮಾರು ₹1 ಲಕ್ಷಕ್ಕೂ ಅಧಿಕ ವೆಚ್ಚವಾಗಿದ್ದು, ವಿವಿಧ ದಾನಿಗಳ ಸಹಕಾರದಿಂದ ನಿಧಿ ಸಂಗ್ರಹಿಸಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.ಜೇಸಿಐ ಸಂಸ್ಥೆ ಸದಾ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿದ್ದು, “ಸಸ್ಟೇನಬಲ್ ಸಿಪ್ಪಿಂಗ್” ಮೂಲಕ ಆರೋಗ್ಯ, ಹಣದ ಉಳಿವು ಹಾಗೂ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ ಇಟ್ಟಿದೆ.ಈ ಸಂದರ್ಭದಲ್ಲಿ “ಒಂದು ನಗರ, ಒಂದು ಗುರಿ, ಒಂದು ಒಳ್ಳೆಯ […]

Continue Reading

ಶಿವಮೊಗ್ಗ | ಹವಾಮಾನ ಬದಲಾವಣೆ ಕುರಿತು ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ

ಮಂಗಳೂರು, ಮುಂಬೈನಂತಹ ನಗರಗಳು ಸಹ ಮುಳುಗುತ್ತಿರುವುದನ್ನು ಕಾಣುತ್ತಿದ್ದೇವೆ ಹಾಗೂ ಹವಾಮಾನ ಬದಲಾವಣೆಯಿಂದ ಮಲೆನಾಡು ಬಯಲುಸೀಮೆಯಾಗಿ, ಮರಳುಗಾಡು ಮಳೆ ಪಡೆಯುವ ನಾಡಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ತುಂಬಾ ತೊಂದರೆಗೀಡಾಗುವವರು ರೈತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗವಾಗಿದೆ. ಆದ್ದರಿಂದ ಹವಾಮಾನ ಬದಲಾವಣೆ, ವೈಪರೀತ್ಯ ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಸಣ್ಣ ಸಣ್ಣ ಬದಲಾವಣೆ ಮಾಡಿಕೊಳ್ಳುವ ಮೂಲಕ ಪರಿಸರಕ್ಕೆ ಉತ್ತಮ ಕೊಡುಗೆ ನೀಡಬಹುದಾಗಿದೆ. ಹಾಗೂ ಮುಖ್ಯವಾಗಿ ಯಾವುದೇ ಒಂದು ಉತ್ತಮ ಹಾಗೂ ಗುಣಮಟ್ಟದ ಕ್ರಿಯಾ ಯೋಜನೆಯನ್ನು ತಯಾರಿಸಲು […]

Continue Reading

ಶಿವಮೊಗ್ಗ | ಜು.5 ರಿಂದ 11ರ ವರೆಗೆ ಶ್ರೀ ಶ್ರೀಧರ ಸಪ್ತಾಹ ಮಾಲಿಕೆ ವಿಶೇಷ ಪ್ರವಚನ

ಪವಾಡ ಪುರುಷರು, ಸಂತರು, ಮಹಾತ್ಮರೂ, ಶ್ರೇಷ್ಠ ಗುರುಗಳು, ಅವಧೂತರು , ಎಂಬಿತ್ಯಾದಿ ಬಿರುದು ಹೊಂದಿರುವ ಶ್ರೀ ಶ್ರೀಧರ ಸ್ವಾಮಿಗಳವರ ಜೀವನ, ಸಾಧನೆ, ಸಾರ್ಥಕತೆಯ ವಿಚಾರವನ್ನು ಪೂಜ್ಯ ಶ್ರೀ ಶ್ರೀ ಶಿವಾನಂದ ಭಾರತೀ ಸ್ವಾಮಿಗಳ ಮುಖಾಂತರವೇ ಸಪ್ತಾಹ ರೂಪದಲ್ಲಿ ಒಂದು ವಾರದ ಕಾಲ ಕೇಳುವ ವಿಶೇಷ ಅವಕಾಶ ಇದಾಗಿದೆ. ಶಿವಮೊಗ್ಗದ ಹಲವು ಸಂಘ ಸಂಸ್ಥೆಗಳು ಹಾಗೂ ಗುರು ಭಕ್ತರು, ಸಂಗೀತ ಶಾಲೆಗಳು ಎಲ್ಲರೂ ಶ್ರದ್ದೆಯಿಂದ ಕೈ ಜೋಡಿಸಿ ನಡೆಸುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಗುರು ಭಕ್ತರು, ಆಸಕ್ತ […]

Continue Reading

​ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರಿಂದ ಹಾರ್ದಿಕ ಅಭಿನಂದನೆ​

ಇದರೊಂದಿಗೆ, ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರದ ಜ್ವಲಂತ ಅಗತ್ಯತೆಗಳು ಹಾಗೂ ನಾಡಿನ ಸಮಸ್ತ ನಾಗರಿಕರ ಸರ್ವತೋಮುಖ ಕಲ್ಯಾಣಕ್ಕಾಗಿ, ಯಾವುದೇ ತಾರತಮ್ಯವಿಲ್ಲದ ಸಮಾನತೆಯ ಮತ್ತು ಪಾರದರ್ಶಕ ಶುದ್ಧ ಆಡಳಿತ ತತ್ತ್ವಗಳ ಅಡಿಯಲ್ಲಿ ತಾವೊಂದು ಹೊಸ ಭರವಸೆಯ ಮುನ್ನುಡಿ ಬರೆಯುವಿರೆಂದು ಬಯಸುತ್ತೇನೆ,” ಎಂದು ತಿಳಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Continue Reading

ಶಿವಮೊಗ್ಗ | ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ ; ಸಾರ್ವಜನಿಕರೆ ಆತಂಕ ಬೇಡ

ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ. ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ನಿರಂತರ ಕನ್ನಡ ಸೇವೆ ನೂತನ ಧ್ವಜಸ್ಥಂಬ ಉದ್ಘಾಟನೆ ಮತ್ತು ಅನ್ನದಾಸೋಹ

ದೊಡ್ಡಪೇಟೆ ಮಂಜುನಾಥ್ ರವರು ಮಾತನಾಡಿ, ಕನ್ನಡ ಸಂಘಟನೆಗಳ ಏಳಿಗೆಗಾಗಿ ನಿರಂತರ ಪರಿಶ್ರಮದ ಫಲವಾಗಿ ಕನ್ನಡವು ರಾಷ್ಟಾçದ್ಯಂತ ಗಮನ ಸೆಳೆಯುತ್ತಿದೆ. ಇಂದಿನ ಧ್ವಜಾರೋಹಣ ಅರ್ಥಪೂರ್ಣವಾಗಿದ್ದು, ಪ್ರತಿಯೊಂದು ರಸ್ತೆಗಳಲ್ಲಿ ಕನ್ನಡ ಧ್ವಜಸ್ಥಂಬ ಸ್ಥಾಪನೆ ಇಂದಿನ ಅವಶ್ಯಕತೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ಕಿರಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಸಾಹಿತಿಗಳಾದ ಗಾ.ರಾ.ಶ್ರೀನಿವಾಸ್, ರಘುರಾಜ್ ಮಲ್ನಾಡ್, ಕಾನೂನು ಸಲಹೆಗಾರರಾದ ಅನಿಲ್ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶಂಕರ ಚೀಲೂರು, ರೋಟರಿ ವಲಯ ಸೇನಾನಿ ಕಿರಣ್ […]

Continue Reading