ಶಿವಮೊಗ್ಗ | ಬಂಗಾರ’ದ ಹಾದಿಯ ವೀಕ್ಷಣೆಗೆ ಡಿಜಿಟಲ್ ವ್ಯವಸ್ಥೆ : ಸಚಿವ ಮಧು ಬಂಗಾರಪ್ಪ ಹೇಳಿಕೆ

‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]

Continue Reading

ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಶಿವಮೊಗ್ಗ | ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಕಳ್ಳತನ

ಇನ್ನೇನು ಸಮೀಪದಲ್ಲಿರುವ ಜಾತ್ರೆಗೆ ಲಕ್ಷಾಂತರ ಜನ ಅಮ್ಮನವರ ದರ್ಶನಕ್ಕೆ ಆಗಮಿಸುತ್ತಾರೆ.ಈ ವೇಳೆಯಲ್ಲಿ ಇಂತಃ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರಿಕಾಂಬ ದೇವಸ್ಥಾನ ಸಮಿತಿಯ ಸದಸ್ಯನೊಬ್ಬ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಅದರಲ್ಲಿ 6 ಲಕ್ಷ ರೂಪಾಯಿ ಬ್ಯಾಂಕ್ ಗೆ ಹಣ ಕಟ್ಟಲು ಇಟ್ಟಿದ್ದರು. ಈ ವೇಳೆ ಸಮಿತಿ ಸಭೆ ನಡೆಯುತ್ತಿರುವಾಗ ಸಮಿತಿಯ ಸದಸ್ಯ ಪ್ರಭಾಕರ್ ಎಂಬಾತನು 50,000₹ ರೂಪಾಯಿಗು ಅಧಿಕ ಹಣವನ್ನು ಕವರ್ ಗೆ ಹಾಕಿಕೊಂಡು ತೆರಳಿದ್ದಾನೆ. ತದ ನಂತರ ಖಜಾಂಚಿ ತಿಮ್ಮಪ್ಪರವರು […]

Continue Reading

ಶಿವಮೊಗ್ಗ | ಸಿಲಿಂಡರ್ ಸ್ಪೋಟಗೊಂಡ ಮನೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ

ಈ ಭೇಟಿಯ ಸಮಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಜ್ಞಾನೇಶ್ವರ್ ಹಾಗೂ ಶ್ರೀ ನಾಗರಾಜ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಪ್ರಭಾಕರ್ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದು ಸಂತ್ರಸ್ತರಿಗೆ ಧೈರ್ಯ ತುಂಬಿದರು.

Continue Reading

ಶಿವಮೊಗ್ಗ | ವಿಕಲಚೇತನ ವ್ಯಕ್ತಿಗೆ ಸಹಾಯಹಸ್ತ ಚಾಚಿದ ಹರೀಶ್ ನಾಯ್ಕ್

ಸಮಾಜ ಸೇವಕ ಯುವ ನಾಯಕ ಹರೀಶ್ ನಾಯ್ಕ್ ನೊಂದ ಜೀವಕ್ಕೆ ಆಸರೆಯಾಗಿ, ಸಂಚರಿಸಲು ಮೂರು ಚಕ್ರದ ಸೈಕಲ್ ನೀಡಿ ಸಹಾಯಹಸ್ತ ಚಾಚಿದ್ದಾರೆ. ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.. ಈ ಸಂದರ್ಭದಲ್ಲಿ ಶಶಿಕುಮಾರ್ ನಾಯ್ಕ್. ಕೆಂಚಪ್ಪ ರಘು ಹೇಮತ್ ಶಿವು ಸಿದ್ದು ಉಮೇಶ್ ಈಶಣ್ಣ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಸಂಭ್ರಮದ ಕ್ರಿಸ್ಮಸ್ ಆಚರಣೆ

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪವಿತ್ರ ಹೃದಯ ಪ್ರಧಾನಾಲಯ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ ನಗರದ ಏಸು ಬಾಲರ ಪುಣ್ಯಕ್ಷೇತ್ರ, ಭದ್ರಾವತಿ ನ್ಯೂ ಟೌನ್ ಅಮುಲೋದ್ಭವಿ ಮಾತೆ ದೇವಾಲಯ, 100 ವರ್ಷ ಇತಿಹಾಸವಿರುವ ಸಾಗರದ ಸಂತ ಜೋಸೆಫರ ದೇವಾಲಯ, ತೀರ್ಥಹಳ್ಳಿಯ ಸೇಂಟ್ ಫಿಲೋಮಿನಾ ಚರ್ಚ್, ಲೂಥರ್ ಮಾತೆಯ ಚರ್ಚ್, ಹೊಸನಗದ ಸೇಂಟ್ ಆಂಥೋನಿ ಚರ್ಚ್, ಶಿಕಾರಿಪುರದ ಚರ್ಚ್, ಸೊರಬದ ಸಂತ ಸಬಾಸ್ಟಿಯನ್ ಚರ್ಚ್ ಸೇರಿದಂತೆ ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ […]

Continue Reading

ಶಿವಮೊಗ್ಗ | ನೂತನವಾಗಿ ಪ್ರಾರಂಭವಾಗಿರುವ ಮಹಾಲಕ್ಷ್ಮಿ ಸ್ವೀಟ್ಸ್ ಎಡವಟ್ಟು.., ತಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸುತ್ತಿದ್ದಾರ?

ಹಾಗಾಗಿ ಪ್ರತಿಯೊಬ್ಬರಿಗೂ ಅಸೋಸಿಯೇಷನ್ ಮೂಲಕ ಸ್ವೀಟ್ಸ್ ಬಾಕ್ಸ್ ಹಾಗೂ ಜಾಹಿರಾತು ನೀಡುತ್ತೇವೆ ನಾವು ಎಲ್ಲವನ್ನು ಸಹಕಾರ ಮಾಡುತ್ತೇವೆ ಎಂದರಂತೆ ಅದರಂತೆ ಮಹಾಲಕ್ಷ್ಮಿ ಸ್ವೀಟ್ಸ್ ನ ಜಾಹಿರಾತು ಹಾಗೂ ಮಾರ್ಕೆಟಿಂಗ್ ವಿಭಾಗದವರು ಅದರಂತೆ ಒಪ್ಪಿದ್ದಾರೆ ಹಾಗೂ ತಲುಪಿಸಿದ್ದಾರಂತೆ ಈಗ ವಾಸ್ತವದಲ್ಲಿ ಅವರಿಗೆ ನಗರದ ಪರಿಚಯ ಆಗುತ್ತಿದೆ ವಾಸ್ತವ ವಿಚಾರಗಳು ಅರಿವಾಗುತ್ತಿದೆ. ಈಗ ದಿಗ್ಬ್ರಮೆಗೆ ಒಳಗಾಗಿದ್ದಾರೆ, ಏನು ಮಾಡಬೇಕು ಎಂದು ತೋಚದ ಪರಿಸ್ಥಿತಿಯಲ್ಲಿದ್ದಾರೆ.ಯಾರಿಗೆ ತೃಪ್ತಿ ಪಡಿಸಬೇಕು ಯಾರಿಗೆ ಜಾಹಿರಾತು ನೀಡಬೇಕು. ಪತ್ರಿಕಾ ಮಾಧ್ಯಮದವರಿಗೆ ಎಂದು ಕೊಟ್ಟ ಸ್ವೀಟ್ ಬಾಕ್ಸ್ ಗಳು […]

Continue Reading

ಶಿವಮೊಗ್ಗ | ವ್ಯಕ್ತಿಗೆ 4.90 ಲಕ್ಷ ರೂ. ಸೈಬರ್ ವಂಚನೆ

ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್‌ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್‌ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading