ಶಿವಮೊಗ್ಗ | ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ, ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ದೂರು

ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೋಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೋಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಮಾನ್ಯ ಜಿಲ್ಲಾ […]

Continue Reading

ಶಿವಮೊಗ್ಗ | ದ್ವೇಷ ಭಾಷಣ ವಿರೋಧಿ ಕಾಯ್ದೆ 1975ರ ತುರ್ತುಪರಿಸ್ಥಿತಿಗಿಂತಲೂ ಕರಾಳ : ಕೆ ಎಸ್ ಈಶ್ವರಪ್ಪ

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ರಾಜ್ಯದ ಜನತೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಇಬ್ಬರ ಹೇಳಿಕೆಗಳಿಗೂ ತಾಳ-ತಂತಿಯಿಲ್ಲದಂತಾಗಿದ್ದು, ಇಡೀ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಶಕ್ತಿ ಕಳೆದುಕೊಂಡಿದ್ದು, ರಾಜ್ಯದ ಉಸ್ತುವಾರಿಗಳೂ ನಾಪತ್ತೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರೂ ಅವರಿಗೆ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು. ಅಲ್ಲದೆ, ಪೂಜ್ಯ ಸ್ವಾಮೀಜಿಗಳನ್ನು ಜಾತಿಗೆ ಸೀಮಿತಗೊಳಿಸಿ ಸಮಾಜವನ್ನು […]

Continue Reading

ಶಿವಮೊಗ್ಗ | ಮಹಿಳೆಯ ಫೊಟೊ ಅಶ್ಲೀಲವಾಗಿ ಮಾರ್ಫ್ ಮಾಡಿ ಹರಿಬಿಟ್ಟ ದುರುಳರು

ಅಷ್ಟೇ ಅಲ್ಲದೆ, ಮಹಿಳೆ ಹಾಗೂ ಅವರ ಪತಿಯ ಫೋಟೋವನ್ನು ಸ್ಟೇಟಸ್ ಹಾಕಿಕೊಂಡು, ಅದರ ಕೆಳಗೆ ಅತ್ಯಂತ ಕೆಟ್ಟದಾದ ಹಾಗೂ ಅವಹೇಳನಕಾರಿ ಶಬ್ದಗಳನ್ನು ಬಳಸಿ ಬ್ಲಾಗ್ ಮಾದರಿಯಲ್ಲಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಕುಪ್ಪಳಿಯಲ್ಲಿ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು. ಅಂದು ಸಂಜೆ 6.00ಕ್ಕೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮAದಿರದಲ್ಲಿ ತೀರ್ಥಹಳ್ಳಿಯ ಸುಮುಖ ಸಂಗೀತ ನೃತ್ಯ ಶಾಲೆ ಮತ್ತು ಶ್ರೀ ರಾಜರಾಜೇಶ್ವರಿ ನೃತ್ಯ ತಂಡ ಪ್ರಸ್ತುತಪಡಿಸುವ ಕುವೆಂಪು ಗೀತೆಗಳ […]

Continue Reading

ಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್

ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]

Continue Reading