ಶಿವಮೊಗ್ಗ | ನಾಡಗೀತೆಗೆ‌ ನೂರರ ಸಂಭ್ರಮ ; ನೂರು ವಿದ್ಯಾರ್ಥಿಗಳಿಂದ, ನೂರು ಕಂಠಗಳ ಸಿರಿ ಗಾಯನ

ವೇದಿಕೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪೂಜ್ಯರಾದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ‌ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಕು. ದಿವ್ಯ ಕರಣಂ ಉಪಸ್ಥಿತರಿದ್ದರು.ಕನ್ನಡ ನಾಡು ನುಡಿಯ ಬಗ್ಗೆ ಹಾಗೂ ಕನ್ನಡ ನಿಮಗೆಷ್ಟು ಗೊತ್ತು? ಎಂಬ ವಿಚಾರವನ್ನು ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿರುವ ಪೂಜ್ಯಶ್ರೀಗಳು ಆಶೀರ್ವಚನ ನೀಡುವ ಸಂದರ್ಭದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಮಹತ್ವವನ್ನು ಸಂಕ್ಷಿಪ್ತವಾಗಿ ತಿಳಿಸಿದರು. […]

Continue Reading