ವರ್ಷದ ಬಳಿಕ ಬೆಳಕಿಗೆ ಬಂದ ಸಂಗೀತಾ ಸಾವಿನ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯ : ಎಸ್‌ಐಟಿ (SIT) ತನಿಖೆಗೆ ಸಂಸದ ಬಿ. ವೈ. ರಾಘವೇಂದ್ರ ಆಗ್ರಹ!

ಪ್ರಕರಣದ ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗಬೇಕು. ಈ ಶೋಷಿತ ಕುಟುಂಬಕ್ಕೆ ಶೀಘ್ರವಾಗಿ ಸೂಕ್ತ ನ್ಯಾಯ ಮತ್ತು ಭದ್ರತೆ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಕೆ.ಎಸ್. ಗುರುಮೂರ್ತಿ ಅವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಸಂಕ್ಲಾಪುರ ಹಾಗೂ ಬಣಜಾರ್ ಸಮಾಜದ ಮುಖಂಡರಾದ ರಾಮ ನಾಯ್ಕ್, ಬಂಗಾರಿ ನಾಯ್ಕ್, ರಮೇಶ್ ನಾಯ್ಕ್, ಸುರೇಶ್ ನಾಯ್ಕ್, ಶ್ರೀಮತಿ ವಿಜಯಲಕ್ಷ್ಮಿ ಸೇರಿದಂತೆ ಬಣಜಾರ್ […]

Continue Reading

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ ; ಸಂಸದ ಬಿ.ವೈ.ರಾಘವೇಂದ್ರ ಮನವಿ

ಬೆಂಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್‌ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು […]

Continue Reading

ಶಿವಮೊಗ್ಗ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಸದಾ ಬದ್ಧ: ಸಂಸದ ಬಿ.ವೈ. ರಾಘವೇಂದ್ರ

ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಸಂಬಂಧಿತ ಅಡಿಕೆಯನ್ನು ಮಹಾರಾಷ್ಟ್ರದಲ್ಲಿ ಎಲ್ಲಿಯೂ ಮಾರಾಟ ಮಾಡಿಲ್ಲ ಅಥವಾ ವಿತರಿಸಿಲ್ಲ. ಈ ಸರಕು ಕೇವಲ ಸಾಗಾಣಿಕೆಯಲ್ಲಿ ಮಾತ್ರ ಇತ್ತು. ಅಷ್ಟೇ ಅಲ್ಲ, ಗುಟ್ಕಾ, ಪಾನ್ ಮಸಾಲಾ ಮತ್ತು ಜರ್ದಾದಂತಹ ನಿಷೇಧಿತ ಪದಾರ್ಥಗಳ ವರ್ಗಕ್ಕೆ ಅಡಿಕೆ ಸೇರುವುದಿಲ್ಲ, ಮಹಾರಾಷ್ಟ್ರದಲ್ಲಿ ಅಡಿಕೆಯ ಮೇಲೆ ಯಾವುದೇ ನಿಷೇಧ ಇಲ್ಲ. ಆದ್ದರಿಂದ, ಈ ವಾಹನಗಳ ವಶಪಡಿಸಿಕೊಳ್ಳುವಿಕೆಗೆ ಕಾನೂನಿನ ಯಾವುದೇ ಆಧಾರ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ನಿಯೋಗ ಸಂಸದರಿಗೆ ಮನವಿ ಸಲ್ಲಿಸಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ: ಸಾವಿರಾರು […]

Continue Reading

ಶಿವಮೊಗ್ಗ | ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ : ಸಂಸದ ಬಿ. ವೈ. ರಾಘವೇಂದ್ರ

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು Ease of Doing Business, Make in India, Startup India, PM Vishwakarma, Production Linked Incentive (PLI) ಸೇರಿದಂತೆ ಹಲವು ಉದ್ಯಮ ಸ್ನೇಹಿ ಸುಧಾರಣೆಗಳ ಮೂಲಕ ದೇಶದ ಕೈಗಾರಿಕಾ ಪರಿಸರವನ್ನು ಬಲಪಡಿಸಿದೆ ಎಂದರು. ಈ ಪರಿವರ್ತನೆಯ ಫಲವಾಗಿ MSME ವಲಯವು ದೇಶದ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಶಿವಮೊಗ್ಗ ಮತ್ತು ಮಲೆನಾಡು ಭಾಗದ ಕೈಗಾರಿಕಾ ಬೆಳವಣಿಗೆಯನ್ನು ಮತ್ತಷ್ಟು […]

Continue Reading

ಶಿವಮೊಗ್ಗ | ‘ವಿಕಸಿತ ಭಾರತ’ದ ಸಂಕಲ್ಪವು ಇನ್ನಷ್ಟು ಬಲಿಷ್ಠವಾಗಿ ಸಾಕಾರಗೊಳ್ಳಲಿ : ಸಂಸದ ಬಿ. ವೈ. ರಾಘವೇಂದ್ರ

ಮಾನ್ಯ ಪ್ರಧಾನಿಯವರ ಜನಪರ ಹಾಗೂ ದೇಶಭಕ್ತಿಯ ನಾಯಕತ್ವವು ನಮಗೆಲ್ಲರಿಗೂ ಸದಾ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರಂತರ ಪ್ರೇರಣೆಯಾಗಿದೆ ಎಂದು ತಿಳಿಸಿದರು.

Continue Reading

ಶಿವಮೊಗ್ಗ | ಸಂಸದ ಬಿ. ವೈ. ರಾಘವೇಂದ್ರರವರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ

ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಮತ್ತೊಮ್ಮೆ ತಮಗೆ ನನ್ನ ಆದರಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದು […]

Continue Reading

ದಶಕಗಳ ಕನಸಾಗಿದ್ದ ‘ಶಿವಮೊಗ್ಗ – ಶೃಂಗೇರಿ – ಮಂಗಳೂರು’ ನೂತನ ರೈಲು ಮಾರ್ಗ ಕುರಿತು ಸಂಸದರಿಂದ ಮತ್ತಷ್ಟು ಅಪ್ಡೇಟ್

ಒಟ್ಟು ಉದ್ದ: 332 ಕಿ.ಮೀ. ಅಂದಾಜು ವೆಚ್ಚ: ₹3,300 ಕೋಟಿ ನೇರ ಲಾಭ ಪಡೆಯುವ ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ. ಪ್ರಮುಖ ಸಂಪರ್ಕ ತಾಲೂಕುಗಳು: ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ.ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಮಲೆನಾಡಿನ ಭಾಗದ ಜನರ ದೀರ್ಘಕಾಲದ […]

Continue Reading