ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]

Continue Reading

ಸಚಿವ ಸಹೋದ್ಯೋಗಿ ಡಿ. ಸುಧಾಕರ್ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್. ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಸಂತಾಪಗಳನ್ನ ಸೂಚಿಸಿದ್ದಾರೆ.

Continue Reading

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ಕುಸಿತ ; ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಸಚಿವ ಮಧು ಬಂಗಾರಪ್ಪ

ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಸೊರಬ | ರಂಗನಾಥಸ್ವಾಮಿ‌ ನೂತನ‌ ರಥ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಆಯ್ಕೆಯಾದ ದಿನದಂದಲೂ ಪುರೋಹಿತರಾದನಾರಾಯಣ ಭಟ್ ಅವರು, ಹೊಸ ರಥವನ್ನು ನಿರ್ಮಾಣ ಮಾಡಲು ಮನವಿ ಮಾಡಿದ್ದರು. ಅನೇಕರ ಶ್ರಮದಿಂದ ಇಂದು ಸಮರ್ಪಣೆ ಆಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.ರಂಗನಾಥ ಸ್ವಾಮಿಯ ಪ್ರಧಾನ ಆರ್ಚಕ ಘನಪಾಠಿ ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರ ಅವಯವಗಳು ರಥದಲ್ಲಿರುತ್ತವೆ. ದೇವರ ಸೂಕ್ಷ್ಮ ರೂಪ ರಥವೇ ಆಗಿದೆ. ಭವ್ಯದಿವ್ಯ ರಥದಲ್ಲಿ ದೇವರು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಬೀದಿಯೊಳಗೆ ಮೆರವಣಿಗೆಯಲ್ಲಿ ನಡೆದರೆ ಗ್ರಾಮದಲ್ಲಿನ ಎಲ್ಲ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಂದು ತಿಳಿಸಿದರು. 136 ವರ್ಷದ […]

Continue Reading

“ಸೊರಬ ಅಗ್ನಿಶಾಮಕ ದಳಕ್ಕೆ ಎರಡು ನೂತನ ಜಲ ವಾಹನಗಳ ಸೇರ್ಪಡೆ”

ಇವುಗಳಿಂದ ಅಗ್ನಿಶಾಮಕ ದಳದ ಕಾರ್ಯಕ್ಷಮತೆ ಮತ್ತಷ್ಟು ಹೆಚ್ಚಲಿದೆ. ಸಿಬ್ಬಂದಿಗಳಿಗೆ ಅಗತ್ಯವಿರುವ ಹೆಚ್ಚಿನ ಸೌಲಭ್ಯಗಳ ಬಗ್ಗೆಯೂ ಗಮನ ಹರಿಸಿ ಅವರ ಬೇಡಿಕೆಗಳನ್ನು ಪರಿಹರಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Continue Reading

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ ; ತೃತೀಯ ಭಾಷೆಯ ಅಂಕಕ್ಕೆ ಕೊಕ್ ಆದರೆ ಪರೀಕ್ಷೆ ಕಡ್ಡಾಯ

ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಈಗ ನಮ್ಮಲ್ಲಿ‌ ಇರುವುದು ತ್ರಿಭಾಷಾ ನೀತಿ. ಎಸ್ಎಸ್ಎಲ್​​​ಸಿಯಲ್ಲಿ ಹಿಂದಿ ಭಾಷೆ ಅಂಕವನ್ನ […]

Continue Reading

ತಂತ್ರಜ್ಞಾನದ ಸದ್ಬಳಕೆಯಾಗಬೇಕು,ಮಕ್ಕಳ ಉಜ್ವಲ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ ; ಸಚಿವ ಮಧು ಬಂಗಾರಪ್ಪ

ಇದು ಸಮಾಜ ಮತ್ತು ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಶಾಲೆಗಳಲ್ಲಿ ‘ನೈತಿಕ ಶಿಕ್ಷಣ’ವನ್ನು ಉಚಿತವಾಗಿ ಪರಿಚಯಿಸಿ, ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸುವ ಕೆಲಸವನ್ನು ಆರಂಭಿಸಲಾಗುವುದು. ತಜ್ಞರು ಮತ್ತು ಪೋಷಕರೊಂದಿಗೆ ಸಮಾಲೋಚನೆ: ಕೇವಲ ಕಾನೂನು ತರುವುದಷ್ಟೇ ಅಲ್ಲ, ಐಟಿ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಸಂಸ್ಥೆಗಳು ಹಾಗೂ ಸೈಬರ್ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಮಾರ್ಗಸೂಚಿಗಳನ್ನು (Guidelines) ರೂಪಿಸಲಾಗುತ್ತಿದೆ. ಪೋಷಕರ ಸಹಕಾರ ಮತ್ತು ಸಂವಹನ ಈ ನಿಟ್ಟಿನಲ್ಲಿ ಅತ್ಯಂತ ಅವಶ್ಯಕವಾಗಿದೆ ಎಂದರು. ದೇಶಕ್ಕೇ ಮಾದರಿ: […]

Continue Reading

ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ ; ಶಿಕ್ಷಣ ಸಚಿವರ ಸ್ಪಷ್ಟನೆ

ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading