Tag: ಸರ್ಕಾರಿ ಶಾಲೆ
ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ
ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]
Continue Readingಶಿವಮೊಗ್ಗ | ಭದ್ರಾಪುರ ಸರ್ಕಾರಿ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ
ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯ ಬಿ.ಕೆ. ಕುಮಾರ್ ಮಾತನಾಡಿ, ಶಾಲೆಯಲ್ಲಿ ಏರ್ಪಡಿಸಿದ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ದೊರೆಯಿತು. ವಿದ್ಯಾರ್ಥಿಗಳು ತಾವು ತಯಾರಿಸಿದ ವಿಜ್ಞಾನ ಮಾದರಿಗಳ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಿದ್ದು ಗಮನಾರ್ಹವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ ಚಿಂತನೆ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ. ಮಾತನಾಡಿ, ಈ ತಿಂಗಳ ಅಂತ್ಯದ ವೇಳೆಗೆ ಎರಡನೇ ಸಂಕಲನಾತ್ಮಕ ಪರೀಕ್ಷೆಗಳು ನಡೆಯಲಿವೆ. ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಓದಲು ಅನುಕೂಲಕರವಾದ […]
Continue Readingಶಿವಮೊಗ್ಗ | ದೊಡ್ಡ ದಾನವಂದಿ ಶಾಲೆಯಲ್ಲಿ ಮಕ್ಕಳ ಸಂತೆ-ಗಣಿತ ಕಲಿಕೆಗೆ ಹೊಸ ದಾರಿ
ಈ ರೀತಿಯ ಚಟುವಟಿಕೆಗಳು ಕಲಿಕೆಯನ್ನು ಕೇವಲ ಪುಸ್ತಕಗಳಿಗೆ ಸೀಮಿತಗೊಳಿಸದೆ ಬದುಕಿನ ಅನುಭವದೊಂದಿಗೆ ಜೋಡಿಸುತ್ತವೆ ಎಂದು ಹೇಳಿದರು.ಎಸ್ಡಿಎಂಸಿ ಅಧ್ಯಕ್ಷೆ ಮಾಲಾ ಮಾತನಾಡಿ, ಶಾಲೆಯಲ್ಲಿ ಈ ರೀತಿಯ ಸಂತೆ ಆಯೋಜಿಸಿರುವುದು ಬಹಳ ಸಂತೋಷ ತಂದಿದೆ. ಮಕ್ಕಳಿಗೆ ವಿಶೇಷವಾಗಿ ಗಣಿತ ವಿಷಯವನ್ನು ಸರಳವಾಗಿ ಮತ್ತು ಆಸಕ್ತಿಯಿಂದ ಕಲಿಯಲು ಇದು ಉತ್ತಮ ಅವಕಾಶವಾಗಿದೆ. ತಮ್ಮ ಸ್ವಂತ ಅನುಭವದ ಮೂಲಕ ಮಕ್ಕಳು ಕಲಿಯುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಅಭಿಪ್ರಾಯಪಟ್ಟರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ಹಿಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ನಡೆಯುತ್ತಿದ್ದ […]
Continue Readingಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ
ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಮಂಜಪ್ಪ ಜಗದೀಶಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಅಡುಗೆ ಸಿಬ್ಬಂದಿ ನೇತ್ರಾವತಿ ಕವಿತಾ, ಶಿಲ್ಪ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರಾದ ಹೇಮಾವತಿ, ಯಶಸ್ವಿನಿ ಮತ್ತು ಬಿಂದು ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ವನಿತಾ ಸ್ವಾಗತಿಸಿದರು. ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿ, ದೀಪಾ ವಂದಿಸಿದರು.
Continue Readingಶಿವಮೊಗ್ಗ | ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯ ಮುಖ್ಯ ಶಿಕ್ಷಕನ ಉಪಟಳಕ್ಕೆ ಬೇಸತ್ತ ಶಿಕ್ಷಕಿ : DDPI ಮೌನವೇಕೆ?
ಶಿಕ್ಷಕಿಗೆ ಸತತ ಕಿರುಕುಳ ನೀಡಿದ್ದರಿಂದ ಶಿಕ್ಷಕಿ ಬೇರೆ ಶಾಲೆಗೆ ನಿಯೋಜನೆ ಹೋಗಿದ್ದರು ಕೂಡ ಮುಖ್ಯಶಿಕ್ಷಕ ಕಳೆದ ಒಂದೂವರೆ ವರ್ಷದಲ್ಲಿ ಬಂದ ಶಾಲಾನುದಾನ ಕುಡಿಯುವ ನೀರು ಸ್ವಚ್ಚತೆ ಅನುದಾನ, ಇಕೋ ಕ್ಲಬ್ ಅನುದಾನ, ಶಿಕ್ಷಕರ ವಿಶೇಷ ಅನುದಾನ ಬಂದಿದ್ದನ್ನು ಸಮರ್ಥವಾಗಿ ಬಳಸದೇ ಎಸ್ ಡಿ ಎಮ್ ಸಿ ಸದಸ್ಯರ ಗಮನಕ್ಕೆ ತರದೇ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕ ಇಬ್ಬರೇ ಹಣ ಡ್ರಾ ಮಾಡಿರುವ ಅoಶ ಬೆಳಕಿಗೆ ಬಂದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಶಿಕ್ಷಕಿಗೆ ತಿಳಿಯುತ್ತದೆ ಎಂದು […]
Continue Readingಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ
ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]
Continue Readingಬೆಳಗಾವಿ | ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ : ಮಧು ಬಂಗಾರಪ್ಪ
ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಈ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Continue Readingಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ
ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]
Continue Reading