ಶಿವಮೊಗ್ಗ | ಶಶಿಧರ ಕೆ.ಎಲ್ ಅವರಿಗೆ ಪಿಎಚ್‌ಡಿ ಪದವಿ

ಅವರ ಈ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಣ್ಣಹನುಮಪ್ಪ ಜಿ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಕುಟುಂಬ ವರ್ಗದವರು ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಹೊಸನಗರ | ಅನಾಥೆಗೆ ಸ್ಪಂದಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಮಾರುತಿಪುರ ಹಾಗೂ ಮೇಲಿನಸಂಪಳ್ಳಿ ಗ್ರಾಮಸ್ಥರು, ದಾನಿಗಳು ಮತ್ತು ಸಮಿತಿಯ ಸದಸ್ಯರು ಕೈಜೋಡಿಸಿ ಶಶಿಕಲಾ ಕುಟುಂಬಕ್ಕೆ ಹೊಸ ಮನೆಯನ್ನು ನಿರ್ಮಿಸಿಕೊಡುವ ಕಾರ್ಯ ಆರಂಭಿಸಿದರು.ಈ ನಡುವೆ ಶಶಿಕಲಾ ಅವರಿಗೆ ಕಿವಿಯಂತ್ರ, ರೇಷನ್ ಕಾರ್ಡ್, ಅಂಗವಿಕಲ ಮಗಳಿಗೆ ಆಧಾರ್ ಕಾರ್ಡ್, ತಾತ್ಕಾಲಿಕ ನಿವಾಸಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಯಿತು. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದಲ್ಲಿ ಸುಮಾರು ₹6.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಾರದಿಂದ […]

Continue Reading

ಸಾಗರ | ಎರಡು ಕಿ. ಮೀ. ರಸ್ತೆ ನಿರ್ಮಿಸಿ ಗ್ರಾಮಸ್ಥರಿಂದ ವಿನೂತನ‌ ಪ್ರತಿಭಟನೆ

ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಗ್ರಾಮೀಣ ಭಾಗಗಳು ಅಭಿವೃದ್ದಿ ಆಗದೆ ಹೋದರೆ ದೇಶ ಅಭಿವೃದ್ದಿ ಆಗುವುದಿಲ್ಲ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಪಡವಗೋಡು ಗ್ರಾಮದಲ್ಲಿ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ಮನವಿ ನೀಡಿದರೂ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಂತ ಹಣ ಹಾಕಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಯನ್ನು ಪ್ರತಿಭಟನೆ ರೂಪದಲ್ಲಿ ನಿರ್ವಹಿಸಿದೆ ಎಂದು ಹೇಳಿದರು. ರೈತ ಸಂಘದ ಕಾರ್ಯಾಧ್ಯಕ್ಷ […]

Continue Reading

ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ, ಬೆದರಿಕೆ ; ಗುತ್ತಿಗೆದಾರನ ವಿರುದ್ಧ ದೂರು

ದೂರಿನ ಅನ್ವಯ, ಆರೋಪಿ ನಾಗರಾಜ್ (A1) ಎಂಬ ಗುತ್ತಿಗೆದಾರನು ಕಳೆದ 2023ರ ಜೂನ್ ತಿಂಗಳಿನಿಂದ 2026ರ ಜೂನ್ 8ರ ಅವಧಿಯಲ್ಲಿ ಸಾಗರ ನಗರಸಭೆಯ ಆವರಣದಲ್ಲಿ ದೂರುದಾರರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. “ನಿನ್ನ ಗಂಡ ಕುಡುಕ, ಅವನಿಂದ ನಿನಗೆ ದೈಹಿಕ ಸುಖ ಸಿಗುವುದಿಲ್ಲ. ನಾನು ನಿನಗೆ ಆಭರಣಗಳನ್ನು ಕೊಡುತ್ತೇನೆ, ನನ್ನೊಂದಿಗೆ ಸಹಕರಿಸು” ಎಂದು ಹೇಳಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ, ಸಂತ್ರಸ್ತೆ ಮಾರುಕಟ್ಟೆಗೆ ಅಥವಾ ಹೊರಗಡೆ ಹೋದಾಗಲೂ ಹಿಂದೆ ಬಂದು ದೈಹಿಕವಾಗಿ ಹಾಗೂ ಮಾನಸಿಕವಾಗಿ ಪೀಡಿಸಿ, ತನಗೆ ಸಹಕರಿಸದಿದ್ದರೆ […]

Continue Reading

ಶಿವಮೊಗ್ಗ | ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಿ ; ಸಾಗರ ಕಾಂಗ್ರೆಸ್‌ ಮುಖಂಡರ ಒಕ್ಕೊರಲ ಒತ್ತಾಯ

ಸಾಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲಸೆ ಚಂದ್ರಪ್ಪ ಅವರು ಮಾತನಾಡಿ, ಮಧುಬಂಗಾರಪ್ಪ ಅವರೂ ನಮ್ಮ ನಾಯಕರು. ಮೂರು ವರ್ಷ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈಗ ಬೇಳೂರು ಗೋಪಾಲಕೃಷ್ಣ ಅವರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಮನವಿಯಾಗಿದೆ. ಬೇಳೂರು ಯುವಜನರ ಆಕರ್ಷಣೆಯ ಕೇಂದ್ರವಾಗಿದ್ದಾರೆ. ಅವರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗುತ್ತದೆ. ಮೂರು ಬಾರಿ ಶಾಸಕರಾಗಿರುವ ಅವರನ್ನು ಗುರುತಿಸಲು ಇದೊಂದು ಅವಕಾಶವಾಗಿದೆ. ಸಾಗರ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕಿರುವ ಕೆಲಸಗಳು ಹೆಚ್ಚಿವೆ. ಅವರಿಗೆ ಅವಕಾಶ ನೀಡಬೇಕು. ಈ ಸಂಬಂಧ ಪಕ್ಷದ ನಾಯಕರನ್ನು ತಾಲೂಕು […]

Continue Reading

ಶಿವಮೊಗ್ಗ | ನಕಲಿ ಎಪಿಕೆ ಫೈಲ್ ಮೇಲೆ ಕ್ಲಿಕ್‌ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ

ತಕ್ಷಣವೇ ಎಚ್ಚೆತ್ತುಕೊಂಡ ಅವರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ಆನ್‌ಲೈನ್ ದೂರು ದಾಖಲಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading