ಹಾಸನ | ಪ್ರೀ ವೆಡ್ಡಿಂಗ್​ ಶೂಟ್​ಗೆ ಹೊರಟ ಭಾವಿ ವರ ಅಪಘಾತದಲ್ಲಿ ದುರ್ಮರಣ

ಮದುವೆಗೆ ಭರದಿಂದ ಸಿದ್ಧತೆ ನಡೆದಿದ್ದು, ಪ್ರೀ ವೆಡ್ಡಿಂಗ್ ಶೂಟ್‌ಗೆಂದು ಭಾವಿ ಪತ್ನಿಯನ್ನು ಕರೆ ತರಲು ಕಾರಿನಲ್ಲಿ ಮನು ಹೋಗುತ್ತಿದ್ದರು. ಈ ವೇಳೆ ಮೂಗಲಿ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Continue Reading

ICSE 10th ಪರೀಕ್ಷೆ ಫಲಿತಾಂಶ ಪ್ರಕಟ : ಸಾನ್ವಿತಗೆ ಉತ್ತಮ ಅಂಕ, ಶುಭಾಶಯಗಳು ಹಾರೈಕೆ

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – results.cisce.org ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅನಂತ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಾನ್ವಿತ.ಕೆ. ಎಸ್ ಈ ಬಾರಿ ನಡೆದ ICSE 10th ಪರೀಕ್ಷೆಯಲ್ಲಿ ಶೇಕಡ. 79% ಪರ್ಸಂಟೇಜ್ ಗಳಿಸುವ ಮೂಲಕ ಉತ್ತಮ ಅಂಕ ಪಡೆದಿದ್ದಾರೆ. ಸಾನ್ವಿತ ಅವರ ತಾಯಿ ದಿವ್ಯ ಗೃಹಿಣಿಯಾಗಿದ್ದಾರೆ ಹಾಗೂ ತಂದೆ ಸುಧಾಕರ್ ಅವರು ಅರಸೀಕೆರೆಯಲ್ಲಿರುವ ಪ್ರತಿಷ್ಠಿತ ಚಂದ್ರಶೇಖರಭಾರತಿ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಸಾನ್ವಿತ ವಿದ್ಯಾರ್ಥಿನಿಯು ಇ-ಕನ್ನಡ ಮಾಧ್ಯಮ ಸಂಪಾದಕರಾದ ರಾಘವೇಂದ್ರ ಅವರ ಸಹೋದರಿಯ […]

Continue Reading

ಹಾಸನ | ಪ್ರೀ ವೆಡ್ಡಿಂಗ್‌ ಫೋಟೊಶೂಟ್‌ ತಂಡದ ಮೇಲೆ ಹಲ್ಲೆ ; ಆರೋಪಿಗಳ ಬಂಧನ

ಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್‌ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್‌ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.

Continue Reading

ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

ನಿಯಂತ್ರಣ ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು. ಸಮಯ ಮರುನಿಗದಿ: ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು […]

Continue Reading

ಹಾಸನ | ಹೆಲ್ಮೆಟ್ ಧರಿಸದೆ ಬುಲೆಟ್ ನಲ್ಲಿ ಜಾಲಿ ರೈಡ್ ; ಅಪಘಾತದಲ್ಲಿ ಯುವತಿ ದುರ್ಮರಣ

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

Continue Reading

15 ವರ್ಷಗಳಿಂದ ಪರಿಹಾರ ನೀಡದೆ ವಿಳಂಬ ; KSRTC Bus ಜಪ್ತಿ ಮಾಡಿದ ನ್ಯಾಯಾಲಯ

ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.

Continue Reading

ಹಾಸನ | ಬೇಲೂರಿನ ಬಾಲೆಗೆ ಮನಸೋತ ಇಂಗ್ಲೆಂಡ್ ಯುವಕ ; ಹಿಂದೂ ಸಂಪ್ರದಾಯದಂತೆ ವಿವಾಹ

ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ. ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. […]

Continue Reading

ಹಾಸನ | ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ

ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.

Continue Reading