Tag: ಹೊಸನಗರ
ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ
ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]
Continue Readingಹೊಸನಗರ | ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ ; ದೂರು ದಾಖಲು
ಆರೋಪಿ ರಮೇಶ್ ತನ್ನ ಅಂಗಡಿಗೆ ಮಾಜೀಷಾ ಫ್ಯಾನ್ಸಿ ಸ್ಟೋರ್ನಿಂದ ಆಗಾಗ್ಗೆ ವಸ್ತುಗಳನ್ನು ಖರೀದಿಸುತ್ತಿದ್ದ. ಆದರೆ, ಆ ವಸ್ತುಗಳ ಬಾಕಿ ಹಣವನ್ನು ಪಾವತಿಸಿರಲಿಲ್ಲ ಎನ್ನಲಾಗಿದೆ. ಹಲವು ಬಾರಿ ಹಣ ಕೇಳಿದರೂ ಆತ ಕೊಟ್ಟಿರಲಿಲ್ಲ. ಏಪ್ರಿಲ್ 27ರಂದು ಮಾಜೀಷಾ ಫ್ಯಾನ್ಸಿ ಸ್ಟೋರ್ನ ಮಾಲೀಕರಾದ ಬಾಲು ಭಾರತಿ ಅವರು ಊರಿನಲ್ಲಿ ಇರಲಿಲ್ಲ. ಈ ವೇಳೆ ಅಂಗಡಿಯ ಸಂಪೂರ್ಣ ಉಸ್ತುವಾರಿಯನ್ನು ವಿನಯ್ ನೋಡಿಕೊಳ್ಳುತ್ತಿದ್ದರು.ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಾಏಕಿ ಅಂಗಡಿಯೊಳಗೆ ನುಗ್ಗಿದ ರಮೇಶ್, ವಿನಯ್ಗೆ ಅವಾಚ್ಯ ಶಬ್ದಗಳಿಂದ ಬೈದು, ಎಡ ಕಪಾಳಕ್ಕೆ ಬಲವಾಗಿ […]
Continue Readingಶಿವಮೊಗ್ಗ | ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್ ವಶಕ್ಕೆ ; ಓರ್ವ ಸೆರೆ, ಇಬ್ಬರು ಪರಾರಿ
ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಭಾಸ್ಕರ್ ಹಾಗೂ ನಾಗರಾಜ್ ಪರಾರಿಯಾಗಿದ್ದು, ಡಾಕಪ್ಪನನ್ನು ಬಂಧಿಸಲಾಗಿದೆ. ಈ ವೇಳೆ 45 ನಾಡ ಬಾಂಬ್ಗಳ ಜೊತೆಗೆ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಾದ ಭಾಸ್ಕರ್ ಹಾಗೂ ನಾಗರಾಜ್ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳೆನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮಂಜುನಾಥ […]
Continue Readingಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು
ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Continue Readingಹೊಸನಗರ | ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು
ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿದೆ. ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ […]
Continue Readingಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ : ವಾಟಗೋಡು ಸುರೇಶ್
ಅಂದು ಮುಂದಾಳತ್ವ ವಹಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ ಎಂದು ಆಪಾದಿಸಿದರು.ಸದ್ಯ ಎರಡು ರಾಷ್ಟ್ರೀಯ ಪಕ್ಷಗಳೂ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿವೆ. ಹಾಗೂ ಪರಸ್ಪರ ವಿರೋಧ ಪಕ್ಷಗಳಾಗಿವೆ. ಸರಕಾರದ ಹಂತದಲ್ಲಿ ಆಗಬೇಕಿರುವ ಕ್ಷೇತ್ರ ಮರುವಿಂಗಡಣೆಗೆ ಸರಕಾರದ ಮಟ್ಟದಲ್ಲಿ ಒತ್ತಡ ಹೇರಬೇಕಾಗಿರುವ ರಾಜಕೀಯ ಮುಖಂಡರು ಅದನ್ನು ಬಿಟ್ಟು ಇಲ್ಲಿ ಜನಸಾಮಾನ್ಯರ ದಿಕ್ಕುತಪ್ಪಿಸಿ ಪಾದಯಾತ್ರೆ ಮಾಡುತ್ತಿರುವುದರ ಔಚಿತ್ಯವೇನು ಎಂದು ಪ್ರಶ್ನಿಸಿದರು..? ಹೊಸನಗರ ಕ್ಷೇತ್ರ ಇಲ್ಲದ ಕಾರಣಕ್ಕೆ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. […]
Continue Readingಶಿವಮೊಗ್ಗ | ಒತ್ತುವರಿ ಮಾಡಿ ಟೆಂಟ್ ಹಾಕಿದ್ದನ್ನು ಕಿತ್ತಿದ್ದಕ್ಕೆ ವಿರೋಧ, ಗಲಾಟೆ
ಅಲ್ಲಿ ಟೆಂಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಪಂಚಾಯಿತಿ ಆಡಳಿತ ಮಂಡಳಿ ಮೊನ್ನೆ ಶನಿವಾರದಂದು ಕಾರ್ಯಾಚರಣೆ ನಡೆಸಿ ಒತ್ತುವರಿಯಾದ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಆದರೆ ಈ ತೆರವು ಕಾರ್ಯಾಚರಣೆಗೆ ಒತ್ತುವರಿದಾರರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. 1991ನೇ ಇಸವಿಯಲ್ಲಿಯೇ ಗ್ರಾಮ ಪಂಚಾಯಿತಿಯು ತಮಗೆ ಅಧಿಕೃತವಾಗಿ ಹಕ್ಕುಪತ್ರವನ್ನು ನೀಡಿದ್ದು, ಆ ದಾಖಲೆಗಳು ತಮ್ಮ ಬಳಿ ಸುರಕ್ಷಿತವಾಗಿವೆ ಎಂಬುದು ಅವರ ಸಮರ್ಥನೆಯಾಗಿದೆ. ಇದೆ ಕಾರಣಕ್ಕೆ ಒತ್ತುವರಿದಾರರು ಹಾಗೂ ತೆರವು ಕಾರ್ಯಾಚರಣೆಗೆ ಮುಂದಾದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು […]
Continue Readingಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು
ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Continue Reading
