ಸಾಗರ | ಬಸ್ ನಿಲ್ದಾಣ ನಿರ್ಮಿಸಿ ; ಎಬಿವಿಪಿ ಮನವಿ

ಈ ಹಿಂದೆ ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣವಿತ್ತು. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣವನ್ನು ಕೆಡವಲಾಗಿದೆ. ಇದರಿಂದ ವಿದ್ಯಾರ್ಥಿಗಳು ಬಿಸಿಲು ಮತ್ತು ಮಳೆಗಾಲದಲ್ಲಿ ಬಸ್‌ಗಾಗಿ ಕಾಯಲು ಸೂಕ್ತ ವ್ಯವಸ್ಥೆ ಇಲ್ಲ. ತಕ್ಷಣ ಎಲ್.ಬಿ.ಕಾಲೇಜಿನ ಎದುರು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಮೋಹನ್ ಎಚ್.ಜಿ., ಸುಜಿತ್ ಡಿ., ಪ್ರಜ್ವಲ್, ನಿತಿನ್ ಕುಮಾರ್ ಇನ್ನಿತರರು ಹಾಜರಿದ್ದರು.

Continue Reading