ರಿಯಲ್ ಎಸ್ಟೇಟ್ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ರೈತರ ಸಮಸ್ಯೆಗೆ ತಲೆಕೆಡಿಸಿಕೊಳ್ಳಿ : ಸಿಎಂಗೆ ವಿಜಯೇಂದ್ರ ತಿರುಗೇಟು..!

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡುತ್ತಾ, ಸಿಎಂ ಅವರು ಕನಕಪುರದ ಮುಖ್ಯಮಂತ್ರಿಯಲ್ಲ, ರಾಜ್ಯದ ಮುಖ್ಯಮಂತ್ರಿ. ರಿಯಲ್ ಎಸ್ಟೇಟ್ ಹಿತಾಸಕ್ತಿ ಬದಿಗಿಟ್ಟು 8 ಜಿಲ್ಲೆಗಳಿಗೆ ಅನುಕೂಲವಾಗುವಂತೆ ತುಮಕೂರಿನಲ್ಲಿ ವಿಮಾನ ನಿಲ್ದಾಣ ತೆರೆಯಬೇಕು ಎಂದು ಆಗ್ರಹಿಸಿದರು. ಇನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಸರ್ಕಾರವೇ ಗೊಂದಲ ಸೃಷ್ಟಿಸಿದ್ದು, ಹೊಸ ಅರ್ಜಿ ಸಲ್ಲಿಕೆಯಲ್ಲಿ 6 ತಿಂಗಳ ಹಣ ನಿಲ್ಲಿಸಿ ಆರ್ಥಿಕ ಸ್ಥಿತಿ ಸುಧಾರಿಸುವ ಭಾವನೆಯಲ್ಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಜುಲೈ 25, 26 […]

Continue Reading

ಐಪಿಎಲ್ ಫೈನಲ್ ಸ್ಥಳಾಂತರ : ಸ್ಟೇಡಿಯಂ ಅಭಿಮಾನಿಗಳದ್ದೇ ಹೊರತು VIPಗಳದ್ದಲ್ಲ : ನಿಖಿಲ್ ಕುಮಾರಸ್ವಾಮಿ

ನಿಖಿಲ್ ಅವರ ತಂದೆ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಒಂದು ಫೋನ್ ಕರೆ ಮಾಡಿದ್ದರೆ ಈ ಸ್ಥಳಾಂತರವನ್ನು ತಪ್ಪಿಸಬಹುದಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿಯೇ ಅಹಮದಾಬಾದ್‌ಗೆ ಪಂದ್ಯವನ್ನು “ಗಿಫ್ಟ್” ಆಗಿ ನೀಡಿ ಕನ್ನಡದ ಅಸ್ಮಿತೆಗೆ ದ್ರೋಹ ಬಗೆದಿದೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆಂದು ಕಿಡಿಕಾರಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕ ಆರ್. ಅಶೋಕ್ ಅವರು ವಿಧಾನಸಭೆಯಲ್ಲಿ ಶಾಸಕರಿಗೆ ಟಿಕೆಟ್ ಕೇಳಿ ಗಲಾಟೆ ಮಾಡಿದಾಗ ನಿಮ್ಮ”ಕರ್ನಾಟಕ ಫಸ್ಟ್” ಸಿದ್ಧಾಂತ ಎಲ್ಲಿ ಹೋಗಿತ್ತು […]

Continue Reading